ಕಲೆಗಳಿಂದ ಭಾರತದ ಶ್ರೀಮಂತಿಕೆ ಉಳಿದಿದೆ. ಕಲಾರಂಗದಲ್ಲಿ ತೊಡಗಿಕೊಂಡಿರುವ ಕಲಾವಿದರ ಕೊಡುಗೆ ಸ್ಮರಣೀಯ ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಹೇಳಿದರು. ನೃತ್ಯಾಂಗನ್ ಸಂಸ್ಥೆ , ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ ನೃತ್ಯ ಲಹರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.