ಪ್ರತಿಯೊಬ್ಬರ ಮನಸಿನಲ್ಲಿ ತಿರಂಗ ಸದಾ ಹಾರುತ್ತಿರಲಿ ಎಂದು ಮೂಡುಬಿದಿರೆ-ಮುಲ್ಕಿ ವಿಧಾನ ಸಭಾಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ೭೮ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ಜೈನ್ ಮಾತನಾಡಿ ಸ್ವಾತಂತ್ರ್ಯ ಲಭಿಸಿದ 77 ವರ್ಷಗಳಿಂದ ದೇಶದಲ್ಲಿಏನೆಲ್ಲ ಬದಲಾವಣೆಯಾಗಿದೆ. ನಮ್ಮದೇಶದ ಪ್ರಗತಿ ಹೇಗಿದೆಎನ್ನುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಿಳಿದುಕೊಳ್ಳಬೇಕು. ಪ್ರತಿಯೊಬ್ಬರ ಹೃದಯದಲ್ಲಿತಾಯಿನಾಡಿನ ಬಗ್ಗೆ ಮಾತೃಭೂಮಿಯ ಬಗ್ಗೆ ಅಭಿಮಾನವಿರಬೇಕು. ನಮಗಾಗಿ ಹೋರಾಡಿ ಮಡಿದ ವೀರಯೋಧರನ್ನು ಸದಾ ಸ್ಮರಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪ್ರದೀಪ್ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಉಪನ್ಯಾಸಕಿ ಸಾಯಿಶೃತಿ ನಿರೂಪಿಸಿದರು. ಸಹ ಮುಖ್ಯೋಪಾಧ್ಯಾಯ ಸ್ವಾಗತಿಸಿದರು. ಸಿಬಿಎಸ್ಸಿ ಶಾಲೆಯ ಪ್ರಾಂಶುಪಾಲರಾದ ಸುರೇಶ್ ವಂದಿಸಿದರು.